04/06/2016
ಶ್ರೀ ತುಳಸಿಯಾ ಸೇವಿಸಿ ಸುಧೆಗಡಲ ಮಧಿಸುವ ಸಮಯದಲಿ ವೈದ್ಯನಾಗಿ ಪದುಮನಾಭನು ತಾನು ಉದುಭವಿಸಿ ಬರಲ೦ದು ಉದುರಿದವು ಕಣ್ಣಿಂದ ಉದಕ ಉತ್ಸಾಹದಿಂದಲದೆ ತುಳಸಿನಾಮವಾಗೇ | ತ್ರಿದಶರೊಂದಿಸುತ ಮೋದದಿಂ ಕೊಂಡಾಡಿದರು ಒದಗಿ ಸುಜನರು ತಮ್ಮ ಸದನದಲಿ ನಿತ್ಯ ಸ ತ್ಪದವಿಗೆ ಸಿದ್ದವೆಂದು ಮುದದಿಂದ ತಿಳಿದು ವೃಂದಾವನ ರಚಿಸಿದರಯ್ಯಾ || ಮೂಲದಲಿ ಸರ್ವತೀರ್ಥಗಳುಂಟು ತನ್ಮಧ್ಯೆ ಕಾಲ ಮೀರದೆ ಸರ್ವನದನದಿಗಳಮರಗಣ ಮೇಲೆ ದಳ ಒಂದರಲಿ ಒಂದೊಂದು ಮೂರುತಿಯು ಆಲಯವಾಗಿಪ್ಪುದು ಮೂರ್ಲೋಕಗಳ ಧರ್ಮವ್ರತಕೆ ಮಿಗಿಲೆನಿಸುವುದು | ನೀಲೆಮೇಘಶ್ಯಾಮ ಗರ್ಪಿಸಿದ ತುಳಸಿ ನಿ ರ್ಮಾಲ್ಯವನು ಸತತ ಕರ್ಣದಲಿ ಧರಿಸಿದ ಮನುಜ ಕಾಲನಾಳಿಗೆ ಶೂಲನೋ || ಉದಯದೊಳಗೆದ್ದು ನೀರೆರೆದು ಮಜ್ಜನಗೈದು ತುದಿಬೆರಳಿನಿಂದ ಮೃತ್ತಿಕೆಯ ಫಣೆಯೊಳಗಿಟ್ಟು ಮುದದಿಂದಲೊಂದು ಪ್ರದಕ್ಷಿಣೆ ನಮಸ್ಕಾರ ತದನಂತರದಲಿ ಭಜನೇ | ವದನದೊಳುಗೈಯೆ ಧರೆಯೊಳಗಿದ್ದ ಸರ್ವ ನದನದಿಗಳಿಗೆ ನೂರ್ಮಡಿಯಾತ್ರೆ ಮಾಡಿದ ಫಲ ಒದಗುವುದು ಹಿಂದಣಾನಂತ ಜನ್ಮಗಳಘವ ತುದಿಮೊದಲು ದಹಿಪುದಯ್ಯಾ || ಆವವನ ಮನೆಯಲ್ಲಿ ತುಳಸಿ ಸಾಲಿಗ್ರಾಮ ಆವವನ ಮನೆಯಲ್ಲಿ ಹರಿದಾಸರಾ ಕೂಟ ಆವವನ ಭುಜದಲ್ಲಿ ತಪ್ತಮುದ್ರಾಂಕಿತವು ಪಾವಮಾನಿಯ ಮತದೊಳು | ಆವವನು ಕಾಲತ್ರಯವ ಕಳೆವನಾವಲ್ಲಿ ಶ್ರೀ ವಾಸುದೇವ ಮುನಿದೇವಾದಿಗಣಸಹಿತ ಕಾವುತ್ತಲಿಪ್ಪ ಬಲಿಗೊಲಿದಂತೆ ತೊಲಗದೆಲೆ ಭಾವಿಸಿರಿ ಭಾವಜ್ಜ್ನರು || ಕಂಡರೆ ದುರಿತಕ್ಕೆ ಕೆಂಡವನು ಬೀರುವುದು ಕೊಂಡಾಡಿದರೆ ಪುಣ್ಯವಪರಿಮಿತವುಂಟು ಮೈ- ದಿಂಡುಗೆಡಹಿದರೆ ಪುನರಪಿ ಜನನವಿಲ್ಲಸಲೆ ದಂಡವಿಟ್ಟವ ಮುಕ್ತನೋ | ಚಂಡಾಲಕೇರಿಯೊಳು ಇರಲು ಹೀನಯವಲ್ಲ ಪಾಂಡುರಂಗಕ್ಷೇತ್ರ ಸರಿಮಿಗಿಲು ಎನಿಸುವುದು ತಂಡತಂಡದ ಕುಲಕೆ ಅವರವರ ಯೋಗ್ಯಫಲ ಕಂಡವರಿಗುಂಟೆ ಅಯ್ಯಾ || ಚಿತ್ತಶುದ್ದನ ಆಗಿ ಮುಂಝಾನೆಯೊಳು ತುಳಸಿ ಸ್ತೋತ್ರವನು ಮಾಡುತ್ತ ದಿವ್ಯವಾಗಿಹ ತ್ರಿದಳ ಪ್ರತ್ಯೇಕ ಪಾತ್ರೆಯಲಿ ತೆಗೆದು ಶೋಧಿಸಿ ತುಂಬಿ ವಿತ್ತಾದಿಯಲಿತಾರದೆ | ಮತ್ತೆ ವಸ್ತ್ರದಿ ಹಸ್ತ ಶಿಲೆಯರ್ಕಏರಂಡ ಪತ್ರದಲಿ ತಾರದೆಲೆ ಭೂಮಿಯೊಳಗಿಡದೆ ಪೂ ರ್ವೋತ್ತರಭಿಮುಖನಾಗಿ ಭಕ್ತಿಯಿಂ ತರಬೇಕು ಹೊತ್ತು ಮೀರಿಸಲಾಗದು || ಕವಿ ಮಂಗಳವಾರ ವೈಧೃತಿ ವ್ಯತೀಪಾತ ರವಿಶಶಿಯ ಸಂಗಮ ಪರ್ವಣಿ ಪುಣ್ಯಕಾಲ ದಿವಸ ದ್ವಾದಶಿ ಶ್ರೇಷ್ಟಉಪರಾಗ ಪಿತೃಶ್ರಾದ್ದ ಇವುಗಳಲಿ ತೆಗೆಯಾದಿರಿ | ನವವಸನಪೊದ್ದು ಊಟವ ಮಾಡಿ ತಾಂಬೂಲ ಸವಿಯುತ್ತ ಮುಟ್ಟದಿರಿ ಯುವತಿ ಶೂದ್ರರಿಂ ತರಿ- ಸುವುದುಚಿತವಲ್ಲೆಂದು ತಿಳಿದು ಕೊಂಡಾಡುತಿರಿ ದಿವಸ ದಿವಸಗೊಳೊಳಯ್ಯಾ || ದಳವಿದ್ದರೇ ಒಳಿತು ಇಲ್ಲದಿದ್ದರೆ ಕಾಷ್ಟ ಎಲೆ ಮೃತ್ತಿಕೆಗಳಿಂದ ಪೂಜೆ ಮಾಡಲಿಬಹುದು ತುಳಸಿ ನಿರ್ಮಾಲ್ಯವಾದರೂ ತ್ರಿವಾರದಲಿ ತೊಳೆತೊಳೆದು ಏರಿಸಲಿ ಬಹುದು | ತುಳಸಿ ಒಣಗಿದ್ದರೂ ಲೇಶದೋಷಗಳಿಲ್ಲ ತುಳಸಿ ವಿರಹಿತ ಪೂಜೆಯದು ಸಲ್ಲದು ತುಳಸೀ ತುಳಸೀ ಎಂದು ಸ್ಮರಣೆಯಾದರೂ ಮಾಡಿ ಜಲಜಾಕ್ಷನರ್ಚಿಸಿರಯ್ಯಾ || ತುಳಸಿ ಇಲ್ಲದ ಸದನ ಹೊಲೆಮಾದಿಗರ ಸದನ ತುಳಸಿ ಇಲ್ಲದ ಬೀದಿ ನರಕಕೆಳೆಸುವ ಹಾದಿ ತುಳಸಿ ಇಲ್ಲದ ತೀರ್ಥವೆಂದಿಗಿದ್ದರೂ ವ್ಯರ್ಥ ತುಳಸಿ ಬಲು ಪ್ರಾಧಾನ್ಯವೋ | ತುಳಸಿ ಮಿಶ್ರಿತವಾದ ನೈವೇದ್ಯ ಗತಿಸಾಧ್ಯ ತುಳಸಿ ಧರಿಸಿದ ದೇಹ ಪರಮ ಸಾರ್ಥಕವೈಯ್ಯ ತುಳಸಿದಳ ಹರಿಗೆ ಅರ್ಪಿಸಿದವನ ಪುಣ್ಯಕ್ಕೆ ನೆಲೆಯ ನಾಗಾಣೆನಯ್ಯ || ಶಿವನ ಸತಿ ಪ್ರಹ್ಲಾದ ನಾರದ ವಿಭೀಷಣರು ಧ್ರುವ ಅಂಬರೀಶ ಶಶಿಬಿಂದು ರುಕ್ಮಾಂಗದರು ಇವರೆ ಮೊದಲಾದವರು ಭಕುತಿ ಪೂರ್ವಕದಲೀ ವಿವರವನು ತಿಳಿದರ್ಚಿಸಿ | ತವಕದಿಂ ತಂತಮ್ಮ ಘನಪದವನೈದಿದರು ಭುವನದೊಳಗುಳ್ಳ ನಿರ್ಮಲಜನರು ಭಜಿಸಿದರು ಜವಭಟರನೋಡಿಸೀ ಜಡದೇಹವನು ನೀಗಿ ಭವ ದೂರರಾದರಯ್ಯಾ || ಉದಯಕಾಲದೊಳೆದ್ದು ಆವನಾದರೂ ತನ್ನ ಹೃದಯನಿರ್ಮಲನಾಗಿ ಭಕುತಿಪೂರ್ವಕದಿಂದ ಸದಮಲಾ ತುಳಸಿಯನು ಸ್ತೋತ್ರಮಾಡಿದ ಕ್ಷಣಕೆ ಮದಗರ್ವ ಪರಿಹಾರವೋ | ಇದೆ ತುಳಸಿ ಸೇವಿಸಲು ಪೂರ್ವದಲಿ ಕಾವೇರಿ ನದಿಯ ತೀರದಲೊಬ್ಬ ಭೂಸುರ ಪದಕೆ ಪೋದ ಪದೆಪದೆಗೆ ಸಿರಿ ವಿಜಯ ವಿಠ್ಠಲಗೆ ಪ್ರಿಯಳಾದ ಮದನತೇಜಳ ಭಜಿಸಿರಯ್ಯಾ ||
Play Time: 41 Minuts 56 Seconds
Size: 7.60 MB